ಇತ್ತೀಚಿನ ಸುದ್ದಿ

ಕಾಂಗ್ರೆಸ್ ಪಂಚ ಗ್ಯಾರಂಟಿ – ಇರುತ್ತೋ, ನಿಲ್ಲಿಸಲಾಗುತ್ತೋ ?

ಬೆಂಗಳೂರು : ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಯಿಂದ ಸರ್ಕಾರ ದಿವಾಳಿ ಆಯಿತು, ತೆಲಂಗಾಣದಲ್ಲಿ ಖುದ್ದು ಮುಖ್ಯಮಂತ್ರಿ ರೇವಂತ್ ರೆಡ್ಡಿ, ಗ್ಯಾರಂಟಿಗೆ ಹಣ ಹೊಂದಿಸಲು ದುಡ್ಡು ಇಲ್ಲ ಎಂದಿದ್ದಾರೆ. ಕರ್ನಾಟಕದಲ್ಲೂ ಗ್ಯಾರಂಟಿ ನಿಲ್ಲಿಸಲಾಗುತ್ತೆ ಎನ್ನುವ ಬಿಜೆಪಿಯ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದನದಲ್ಲೇ ಸ್ಪಷ್ಟನೆಯನ್ನು ನೀಡಿದ್ದಾರೆ.“ನಾವು ಈ ರಾಜ್ಯದ ಬಡಜನತೆಗೆ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಮೂಲಕ ಅನುಕೂಲ ಮಾಡಿಕೊಟ್ಟಿದ್ದೇವೆ. ಹೆಣ್ಣು ಕುಟುಂಬದ ಕಣ್ಣು ಎಂದು ಅವರಿಗೆ ಸಹಾಯ ಮಾಡಿದ್ದೇವೆ. ಒಂದು ಸಮಯದಲ್ಲಿ ವಿಪಕ್ಷಗಳು ನಮ್ಮನ್ನು ಹೆದರಿಸಲು ಪ್ರಯತ್ನಪಟ್ಟವು. ಈ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿಇರುವ ತನಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದು ನಮ್ಮ ಬದ್ಧತೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದರು.ಆರ್.ಅಶೋಕ್ ಬಳಸಿರುವ ಮನೆಹಾಳು ಪದ ಕಡತಲ್ಲಿಯೇ ಉಳಿಯಲಿ. ನಾವು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಮನೆ ಕಟ್ಟುತ್ತಿದ್ದೇವೆ. ಆದರೂ ಮನೆಹಾಳು ಪದ ಪ್ರಯೋಗಿಸಿದ್ದಾರೆ” ಎಂದು ಡಿ.ಕೆ.ಶಿವಕುಮಾರ್ ಅವರು ವಿಪಕ್ಷದ ನಾಯಕರಿಗೆ ತಿವಿದರು.ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಮಾತನಾಡುತ್ತಿದ್ದ ವಿಪಕ್ಷದ ನಾಯಕ ಆರ್.ಅಶೋಕ್, ಗ್ಯಾರಂಟಿ ಅನುಷ್ಟಾನ ಸಮಿತಿ ಮೂಲಕ ಕಾರ್ಯಕರ್ತರಿಗೆ ವೇತನ ನೀಡಿ ಕಾಂಗ್ರೆಸ್ ʼಮನೆಹಾಳುʼ ಮಾಡುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಡಿಸಿಎಂ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.“ನಮ್ಮ ಜನ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದರು. ಪ್ರತಿಯೊಂದು ಪದಾರ್ಥಗಳ ಬೆಲೆಯೂ ಹೆಚ್ಚಾಗಿತ್ತು. ಆದ ಕಾರಣಕ್ಕೆ ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿತು. ಈ ಯೋಜನೆಗಳಿಗೆ ನೂರಾರು ಟೀಕೆ- ಟಿಪ್ಪಣಿಗಳು ಬಂದವು” ಎಂದು ಡಿ.ಕೆ.ಶಿವಕುಮಾರ್ ಹೇಳಿದರು.ಒಂದು ಕಾಳು ಕಡಿಮೆ ಕೊಟ್ಟರೂ ಸಹ ಸುಮ್ಮನಿರುವುದಿಲ್ಲ ಎಂದು ಯಡಿಯೂರಪ್ಪ ಅವರು ಹೇಳಿದರು. ಇದು ಕಾಂಗ್ರೆಸ್ ಸರ್ಕಾರದಿಂದ ಸಾಧ್ಯವೇ ಎಂದರು. ನಾವು ಅಧಿಕಾರಕ್ಕೆ ಬಂದ ಮೊದಲನೇ ದಿನವೇ ಐದು ಗ್ಯಾರಂಟಿಗಳಿಗೆ ಒಪ್ಪಿಗೆ ಕೊಟ್ಟು ಆದೇಶ ಹೊರಡಿಸಿದೆವು ಎಂದು ಡಿ.ಕೆ.ಶಿವಕುಮಾರ್, ತಮ್ಮ ಸರ್ಕಾರದ ಕೆಲಸವನ್ನು ಹೊಗಳಿಕೊಂಡರು.ಒಂದು ರಾಜ್ಯದ ಶೇ 20 ರಷ್ಟು ಬಜೆಟ್ ಅಂದರೆ 50 ಸಾವಿರ ಕೋಟಿಯಷ್ಟು ಹಣ ಮೀಸಲು ಇಡಲು ಎಷ್ಟು ಸಮಸ್ಯೆಯಿದೆ ಎನ್ನುವ ಅರಿವು ನಮಗಿದೆ. ಆದರೆ ನಮಗೆ ಜನರ ಕಲ್ಯಾಣ ಮುಖ್ಯ. ಜೀವ ಇದ್ದರೆ ಜೀವನ. ಒಂದು ಗ್ಯಾಸ್ ಸಿಲಿಂಡರ್ ಬೆಲೆ ರೂ. 1,100, ಅಡುಗೆ ಎಣ್ಣೆ ಬೆಲೆ ರೂ.200 ಸೇರಿದಂತೆ, ಸಿಮೆಂಟ್, ಪೆಟ್ರೋಲ್, ಡಿಸೇಲ್ ಬೆಲೆ ಎಲ್ಲವೂ ಗಗನಕ್ಕೆ ಹೋಗಿತ್ತು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದರು, ಹೀಗಾಗಿ ಗ್ಯಾರಂಟಿ ಯೋಜನೆ ನೀಡಿದೆವು. ಈ ಗ್ಯಾರಂಟಿಗಳಿಗೆ ಅಂದು ಟೀಕೆ ಮಾಡಿದ ಬಿಜೆಪಿ, ಇಂದು ತನ್ನ ಆಡಳಿತವಿರುವ ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳು ಸೇರಿದಂತೆ ಅನೇಕ ರಾಜ್ಯಗಳ ಸರ್ಕಾರಗಳು ಗ್ಯಾರಂಟಿಗಳನ್ನು ಜಾರಿಗೊಳಿಸಿವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.ಪ್ರಾರಂಭದಲ್ಲಿ ಗ್ಯಾರಂಟಿಗಳಿಗೆ ವಿರೋಧ ಮಾಡಿದರು. ಆದರೂ ನಾವು ಜಾರಿಗೆ ತಂದೆವು. ಅದು ಜನರಿಗೆ ತಲುಪಿತು. ಪ್ರಧಾನಮಂತ್ರಿಗಳಿಂದ ಹಿಡಿದು ಪ್ರತಿಪಕ್ಷದ ಪ್ರತಿಯೊಬ್ಬರೂ ಗ್ಯಾರಂಟಿ ಯೋಜನೆಗಳಿಗೆ ಟೀಕೆ ಮಾಡಿರುವವರೇ ಎಂದು ಬಿಜೆಪಿ ನಾಯಕ ಸುನೀಲ್ ಕುಮಾರ್ ಅವರಿಗೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

Related Articles

Leave a Reply

Your email address will not be published. Required fields are marked *

Back to top button