ಡಿಕೆ ಶಿವಕುಮಾರ್ ಕನಸಿನ ಯೋಜನೆ ಪರನಿಂತ ಹಿಂದೂ ಸಂಘಟನೆಗಳು

ಕಾವೇರಿ ಆರತಿ (Cauvery Aarti) ಮತ್ತು ಕೆಆರ್ಎಸ್ ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗೆ ಈಗಾಗಲೇ ಸಾಕಷ್ಟು ತೀವ್ರ ವಿರೋಧ ವ್ಯಕ್ತವಾಗಿದೆ. ವಿರೋಧದ ನಡುವೆಯೂ ಯೋಜನೆ ಸಂಬಂಧಿಸಿತದಂತೆ ಇತ್ತೀಚೆಗೆ ಕಾಮಗಾರಿಗಳನ್ನ ಆರಂಭಿಸಿದ್ದ ಸರ್ಕಾರದ ವಿರುದ್ಧ ಕೂಡ ಹೋರಾಟಗಾರರು ಸಿಡಿದೆದಿದ್ದರು. ಇದೆಲ್ಲದರ ಮಧ್ಯೆ ಇದೀಗ ಯೋಜನೆಗೆ ಹಿಂದೂ ಸಂಘಟನೆ ಮುಖಂಡರು ಬಹುಪರಾಕ್ ಎನ್ನುತ್ತಿದ್ದಾರೆ. ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕನಸಿನ ಯೋಜನೆಗೆ ಹಿಂದೂ ಸಂಘಟನೆಗಳು ಮತ್ತು ಮುಖಂಡರು ಬೆಂಬಲ ಸೂಚಿಸಿದ್ದಾರೆ.ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಆಗಿರುವ ಚನ್ನಣ್ಣವರ, ಈ ಹಿಂದೆ ಈಜಿನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಆದರೆ ಈ ಬಾರಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ, ರಾಜ್ಯಕ್ಕೆ ಹೆಮ್ಮೆ ಮೂಡಿಸಿದ್ದಾರೆ.
ಮಂಡ್ಯದಲ್ಲಿ ಕಾವೇರಿ ಆರತಿ ಯೋಜನೆಗೆ ಸಂಬಂಧಿಸಿದಂತೆ ಪರ-ವಿರೋಧ ತಾರಕಕ್ಕೇರಿದೆ. ಮೊದಲಿನಿಂದಲೂ ಕಾವೇರಿ ಆರತಿಗೆ ರೈತ ಸಂಘಟನೆಗಳು ಮತ್ತು ಪ್ರಗತಿಪರರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರು ಕೂಡ ಇದಕ್ಕೆ ವಿರೋಧಿಸಿದ್ದು, ರೈತರ ಪರವಾಗಿ ನಿಂತಿದ್ದಾರೆ. ಹೀಗಿರುವಾಗ ಅಚ್ಚರಿ ಎಂಬಂತೆ ಹಿಂದೂ ಸಂಘಟನೆಗಳು ಮತ್ತು ಮುಖಂಡರು ಯೋಜನೆ ಪರ ನಿಂತ್ತಿದ್ದು, ಈ ಯೋಜನೆ ಕೈ ಬಿಟ್ಟರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಹಿಂದೂಪರ ಸಂಘಟನೆಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಮಾತನಾಡಿದ್ದು, ಯೋಜನೆ ರೂಪಿಸಿದ ಡಿಕೆ ಶಿವಕುಮಾರ್ ಹಾಗೂ ಚಲುವರಾಯಸ್ವಾಮಿಗೆ ಅಭಿನಂದನೆ. ಕಾವೇರಿ ಆರತಿಗಾಗಿ ಕಾಂಗ್ರೆಸ್ ಸರ್ಕಾರದ ಪರ ನಾವು ನಿಲ್ಲುತ್ತೇವೆ. ಗಂಗಾ ಆರತಿಗಿಂತ ವಿಭಿನ್ನವಾಗಿ ಕಾವೇರಿ ಆರತಿ ಮಾಡಿ ಎಂದಿದ್ದಾರೆ.ಕೆಲವು ಸೋಗಲಾಡಿ, ಸ್ವಾರ್ಥ ಪ್ರಗತಿಪರರ ಹೋರಾಟಕ್ಕೆ ಸರ್ಕಾರ ಮಣಿಯಬಾರದು. ಕಾವೇರಿ ಆರತಿ ನಮ್ಮ ಸಂಸ್ಕೃತಿಯ ಪ್ರತೀಕ, ಪರಂಪರೆಗೆ ಪ್ರೋತ್ಸಾಹ. ಸ್ಥಳೀಯ ಪ್ರದೇಶಗಳ ಅಭಿವೃದ್ಧಿ, ಆರ್ಥಿಕತೆ ವೃದ್ಧಿ, ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ. 100 ಕೋಟಿಯಲ್ಲ 200 ಕೋಟಿ ರೂ ಆದರೂ ಮಾಡಿ. ವಿರೋಧಕ್ಕೆ ಕ್ಯಾರೆ ಅನ್ನದೇ ಕಾವೇರಿ ಆರತಿ ಮಾಡಲೇಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಈ ಬಗ್ಗೆ ಇತ್ತೀಚೆಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಆರ್ಎಸ್ ಬಳಿ ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವುದನ್ನು ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ಹೇಳಿದ್ದರು.


