ವಿಧಾನಸಭೆ
Trending

ಹನಿಟ್ರ್ಯಾಪ್ ಕೆಟ್ಟ ಚಾಳಿ, ಅನಿಷ್ಟ ಪದ್ದತಿ

ಬೆಂಗಳೂರು: ‘ ಹನಿಟ್ರ್ಯಾಪ್ ಕೆಟ್ಟ ಚಾಳಿಯಾಗಿದೆ ಹಾಗೂ ಅನಿಷ್ಟ ಪದ್ದತಿಯಾಗಿದೆ. ಇದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ’ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ‘ಹನಿಟ್ರ್ಯಾಪ್ ವಿಚಾರವಾಗಿ ಸುಪ್ರೀಂಕೋರ್ಟ್ ನಲ್ಲೂ ಅರ್ಜಿ ವಜಾ ಮಾಡಿದೆ. ರಾಜಕೀಯವಾಗಿ ಮುಗಿಸಲು, ಬ್ಲ್ಯಾಕ್ ಮೇಲ್ ಮಾಡಲಿಕ್ಕೆ ಇದನ್ನು ಬಳಸಿಕೊಳ್ಳುವುದು‌ ಹೀನ‌ಕೃತ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸಹಕಾರಿ ಸಚಿವ ಕೆ ಎನ್ ರಾಜಣ್ಣ ವಿರುದ್ಧ ನಡೆದಿರುವ ಹನಿಟ್ರ್ಯಾಪ್ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ, ‘ಹನಿಟ್ರ್ಯಾಪ್ ನಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸುಪ್ರೀಂ ಕೋರ್ಟ್ ಸಹ ಈ ಪ್ರಕರಣವನ್ನು ವಜಾ ಮಾಡಿದೆ’ ಎಂದು ಹೇಳಿದರು.’ ಹನಿಟ್ರ್ಯಾಪ್ ವಿಚಾರವಾಗಿ ರಾಜಣ್ಣ ದೂರು ನೀಡಲು ಹಿಂದೇಟು ಹಾಕಿರುವುದು ಅವರಿಗೆ ಬಿಟ್ಟ ವಿಚಾರ. ಅದು ಅವರಿಗೆ ಹಾಗೂ ಗೃಹ ಸಚಿವರಿಗೆ ಬಿಟ್ಟ ವಿಚಾರವಾಗಿದೆ ಎಂದರು. ಇನ್ನು ಇದೇ ಸಂದರ್ಭದಲ್ಲಿ ಡಿಜಿಟಲ್ ಮೀಟರ್ ಅಳವಡಿಕೆ ವಿಚಾರ ದೊಡ್ಡ ಹಗರಣದ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ‘ ಈ ಆರೋಪದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬದಲಾಗಿ ಇಂಧನ ಸಚಿವರು ಉತ್ತರ ನೀಡ್ತಾರೆ ‘ ಎಂದರು.ನಾರಾಯಣಪುರ ಡ್ಯಾಂ ನೀರು ಬಿಟ್ಟ ವಿಚಾರಕ್ಕೆ ಮಾತನಾಡಿದ ಅವರು, 10 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ. ಒಂದು ಟಿಎಂಸಿ ನೀರು ಬಿಟ್ಟಿರಬಹುದು ಎಂದು ಸಮರ್ಥಿಸಿಕೊಂಡರು.ಎಂಎಸ್ ಎಂಇ ವಿಚಾರವಾಗಿ ಚರ್ಚಿಸಲು ದೆಹಲಿಗೆ ಹೋಗುವ ಪ್ಲ್ಯಾನ್ ಇದೆ. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೇನೆ. ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಆಹ್ವಾನ ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಹೇಳಿದ್ರೆ ಅವರ ಬಳಿಯೇ ಮಾಹಿತಿ ಕೇಳಿ ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಸಂವಿಧಾನ ತಿದ್ದುಪಡಿ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ವಿಚಾರವಾಗಿ, ‘ಬಿಜೆಪಿಯವರು ಮಾಜಿ ಸಂಸದ ಅನಂತ ಕುಮಾರ ಹೆಗ್ಡೆ ಹೇಳಿದ ಹೇಳಿಕೆ ಬಗ್ಗೆ ಮೊದಲು ಮಾತನಾಡಲಿ. ಅವಾಗ ಯಾಕೆ ಪ್ರತಿಭಟನೆ ಮಾಡಲಿಲ್ಲ. ಯಾಕೆ ಬೂತ್ ಲೇವಲ್ ನಲ್ಲಿ ಹೋರಾಟ ಯಾಕೆ ಮಾಡಲಿಲ್ಲ? ಡಿಕೆ ಶಿವಕುಮಾರ ಈಗಾಗಲೇ ಹೇಳಿದ್ದಾರೆ. ನಾನು ಆ ರೀತಿ ಮಾತನಾಡಿಲ್ಲ ಅಂತಾ ಹೇಳಿದ್ದಾರೆ’ ಎಂದು ಸಮರ್ಥಿಸಿಕೊಂಡರು.ಅನಂತ ಕುಮಾರ್ ಹೆಗ್ಡೆ ನಾವು ಅಧಿಕಾರಕ್ಕೆ ಬಂದಿರೋದೇ ಸಂವಿಧಾನ ಬದಲಾವಣೆಗೆ ಅಂದಾಗ ಯಾಕೆ ಪ್ರತಿಭಟನೆ ಮಾಡಲಿಲ್ಲ‌. ಅವಾಗ ಅವರನ್ನ ಯಾಕೆ ಮಂತ್ರಿ ಸ್ಥಾನದಿಂದ ವಜಾ ಮಾಡಲಿಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


Related Articles

Leave a Reply

Your email address will not be published. Required fields are marked *

Back to top button