Country
Trending

ದೆಹಲಿಯಲ್ಲಿ ಮಳೆಯಾರ್ಭಟ; ನಾಲ್ವರ ಸಾವು, ವಿಮಾನ ಹಾರಾಟದಲ್ಲಿ ಏರುಪೇರು

ಹೊಸದಿಲ್ಲಿ: ದ್ವಾರಕದಲ್ಲಿ ಭಾರಿ ಮಳೆ, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದಾಗಿ ಶುಕ್ರವಾರ(ಮೇ.2) ಬೆಳಿಗ್ಗೆ 40ಕ್ಕೂ ಹೆಚ್ಚು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಯಿತು. ಸುಮಾರು 100 ವಿಮಾನಗಳು ತಡವಾಗಿ ಹಾರಾಟ ನಡೆಸಿದವು. ಮತ್ತೊಂದೆಡೆ ವರುಣಾರ್ಭಟಕ್ಕೆ ಮನೆಯ ಮೇಲೆ ಮರ ಉರುಳಿ ಮಹಿಳೆ ಮತ್ತು ಆಕೆಯ ಮಕ್ಕಳು ಮೃತ ಪಟ್ಟ ಘಟನೆ ನಡೆದಿದೆ.ದೆಹಲಿಯಲ್ಲಿ ಬಿರುಗಾಳಿಯ ನಂತರ ಭಾರೀ ಮಳೆಯಾಗಿದೆ. ಇದರಿಂದ ತಾಪಮಾನವು ಗಣನೀಯವಾಗಿ ಕುಸಿದಿದೆ. ವಿಮಾನಗಳ ಹಾರಾಟದ ಮೇಲೆ ತೀವ್ರ ಪರಿಣಾಮ ಉಂಟಾಗಿದೆ. ಮೂರು ವಿಮಾನಗಳನ್ನು ಅಹಮದಾಬಾದ್ ಮತ್ತು ಜೈಪುರಕ್ಕೆ ತಿರುಗಿಸಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಈ ದುರ್ಘಟನೆ ಸಂಭವಿಸಿದೆ.

ವಿಮಾನ ಹಾರಾಟದಲ್ಲಿ ವ್ಯತ್ಯಯ

ದೆಹಲಿಯಲ್ಲಿ ಭಾರಿ ಗಾಳಿ ಮಳೆಗೆ ನಾಲ್ವರು ಬಲಿಯಾಗಿದ್ದಾರೆ. ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಆಗಮನವು ಸರಾಸರಿ 21 ನಿಮಿಷಗಳಷ್ಟು ವಿಳಂಬವಾಗಿದೆ. ನಿರ್ಗಮನವು 61 ನಿಮಿಷಗಳಷ್ಟು ವಿಳಂಬವಾಗಿದೆ ಎಂದು ಫ್ಲೈಟ್ ರ್‍ಯಾದರ್‌ ತಿಳಿಸಿದೆ. ದೆಹಲಿಯಿಂದ ಹೊರಡುವ 20ಕ್ಕೂ ಹೆಚ್ಚು ವಿಮಾನಗಳು ತಡವಾಗಿ ಚಲಿಸುತ್ತಿವೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ತಮ್ಮ ವಿಮಾನಗಳ ಸ್ಥಿತಿಯನ್ನು ಪರಿಶೀಲಿಸುವಂತೆ ಹಲವು ವಿಮಾನಯಾನ ಸಂಸ್ಥೆಗಳು ಮನವಿ ಮಾಡಿಕೊಂಡಿವೆ.

” ಮಳೆ, ಮೋಡಕವಿದ ವಾತಾವರಣ ಹಿನ್ನೆಲೆ, ದೆಹಲಿಯಿಂದ ನಮ್ಮ ಕೆಲವು ವಿಮಾನಗಳ ಹಾರಾಟ ವಿಳಂಬವಾಗುತ್ತಿವೆ. ಇದು ನಮ್ಮ ಒಟ್ಟಾರೆ ವಿಮಾನ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅಡಚಣೆ ತಪ್ಪಿಸಲು ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ” ಎಂದು ಏರ್ ಇಂಡಿಯಾ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ.

ದೆಹಲಿಯ ಹಲವು ಭಾಗಗಳಲ್ಲಿ ನೀರು ನಿಂತಿದೆ. ದ್ವಾರಕಾ, ಖಾನ್‌ಪುರ, ಸೌತ್ ಎಕ್ಸ್‌ಟೆನ್ಶನ್ ರಿಂಗ್ ರೋಡ್, ಮಿಂಟೋ ರೋಡ್, ಲಜಪತ್ ನಗರ ಮತ್ತು ಮೋತಿ ಬಾಗ್‌ನಂತಹ ಪ್ರದೇಶಗಳಲ್ಲಿ ನೀರು ನಿಂತಿರುವ ದೃಶ್ಯಗಳು ಕಂಡುಬಂದಿವೆ. ಗಾಳಿಯ ರಭಸಕ್ಕೆ ಮರಗಳು ಧರೆಗುರುಳಿವೆ. ಕೆಲವು ಮರಗಳ ಕೊಂಬೆಗಳು ಮುರಿದು ಬಿದ್ದಿವೆ. ಆಸ್ತಿಪಾಸ್ತಿ ನಷ್ಟದ ಬಗ್ಗೆ ಇನ್ನೂ ಅಂದಾಜು ಮಾಡಲಾಗಿಲ್ಲ.

ದೆಹಲಿಯಲ್ಲಿ ತಾಪಮಾನ 19.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ದೆಹಲಿಯಲ್ಲಿ 70-80 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ರಾಷ್ಟ್ರೀಯ ರಾಜಧಾನಿಗೆ ಶನಿವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿಯ ಸಾಧ್ಯತೆಯಿದೆ ಎಂದು ತಿಳಿಸಿದೆ. ಬುಧವಾರ ಸಂಜೆ ಆಕಾಶವು ಮೋಡ ಕವಿದ ವಾತಾವರಣದಿಂದ ಕೂಡಿತ್ತು. ನಗರದಲ್ಲಿ ಗರಿಷ್ಠ ತಾಪಮಾನ 38.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು ಸರಾಸರಿಗಿಂತ 0.9 ಡಿಗ್ರಿ ಕಡಿಮೆ.ಮೇ ತಿಂಗಳಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು IMD ಹೇಳಿದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಇದು ದೀರ್ಘಾವಧಿಯ ಸರಾಸರಿ 64.1 ಮಿಮೀಗಿಂತ 109 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಷ್ಟ್ರೀಯ ರಾಜಧಾನಿಗೆ ಶನಿವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿಯ ಸಾಧ್ಯತೆಯಿದೆ ಎಂದು ತಿಳಿಸಿದೆ. ಬುಧವಾರ ಸಂಜೆ ಆಕಾಶವು ಮೋಡ ಕವಿದ ವಾತಾವರಣದಿಂದ ಕೂಡಿತ್ತು. ನಗರದಲ್ಲಿ ಗರಿಷ್ಠ ತಾಪಮಾನ 38.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು ಸರಾಸರಿಗಿಂತ 0.9 ಡಿಗ್ರಿ ಕಡಿಮೆ.ಮೇ ತಿಂಗಳಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು IMD ಹೇಳಿದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಇದು ದೀರ್ಘಾವಧಿಯ ಸರಾಸರಿ 64.1 ಮಿಮೀಗಿಂತ 109 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button