World
Trending

ಭಾರತ-ಪಾಕಿಸ್ತಾನ ಜಗಳ ಬಿಡಿಸಿದ್ದು ನಾನೇ

ವಾಷಿಂಗ್ಟನ್‌ ಡಿಸಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ “ಶ್ರೇಷ್ಠತೆಯ ವ್ಯಸನ” ಅಂಟಿಕೊಂಡಂತಿದೆ. ತಾನೇ ಶ್ರೇಷ್ಠ ಉಳಿದವರೆಲ್ಲಾ ಕನಿಷ್ಠ ಎಂಬ ಅವರ ನಡುವಳಿಕೆ ಕೆಲವೊಮ್ಮೆ ಅಮೆರಿಕರನ್ನೂ ಮುಜುಗರಕ್ಕೀಡು ಮಾಡುತ್ತದೆ. ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ವಾದಿಸುತ್ತಲೇ ಇರುವ ಡೊನಾಲ್ಡ್‌ ಟ್ರಂಪ್‌, ಉಭಯ ರಾಷ್ಟ್ರಗಳ ನಡುವೆ ಶಾಂತಿ ಸ್ಥಾಪಿಸಿದ್ದು ನಾನೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ.ಅಮೆರಿಕಕ್ಕೆ ಭೇಟಿ ನೀಡಿರುವ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಪೋಸಾ ಅವರೊಂದಿಗಿನ ಮಾತುಕತೆ ವೇಳೆಯೂ, ಡೊನಾಲ್ಡ್‌ ಟ್ರಂಪ್‌ ಅವರು ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ವಾತಾವರಣವನ್ನು ಉಲ್ಲೇಖಿಸಿದ್ದಾರೆ. ಅಲ್ಲದೇ ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಡಲು ನಮ್ಮ ಆಡಳಿತವೇ ಕಾರಣ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಸಿರಿಲ್‌ ರಾಮಪೋಸಾ ಅವರೊಂದಿಗಿನ ಮಾತುಕತೆಯಲ್ಲಿ ಭಾರತ-ಪಾಕಿಸ್ತಾನ ಕದನ ವಿರಾಮ ಒಪ್ಪಂದ ಉಲ್ಲೇಖಿಸಿದ ಡೊನಾಲ್ಡ್‌ ಟ್ರಂಪ್‌, “ನಮ್ಮ ಸಕಾಲಿಕ ಮಧ್ಯಪ್ರವೇಶದಿಂದ ಉಭಯ ರಾಷ್ಟ್ರಗಳ ನಡುವಿನ ಸಂಭಾವ್ಯ ಪರಮಾಣುಯುದ್ಧದ ಆತಂಕ ದೂರವಾಯಿತು” ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಪೋಸಾ ಅವರೊಂದಿಗೆ ಓವಲ್‌ ಕಚೇರಿಯಲ್ಲಿ ಮಾತನಾಡಿದ ಡೊನಾಲ್ಡ್‌ ಟ್ರಂಪ್‌, “ನಾವು ಪಾಕಿಸ್ತಾನ ಮತ್ತು ಭಾರತದೊಂದಿಗೆ ಏನು ಮಾಡಿದ್ದೇವೆ ಎಂಬುದನ್ನು ನೀವು ನೋಡಿದರೆ, ನಾವು ಆ ಇಡೀ ವಿಷಯವನ್ನು ವ್ಯಾಪಾರದ ಮೂಲಕ ಇತ್ಯರ್ಥಪಡಿಸಿಕೊಂಡಿದ್ದೇವೆ. ನಾವು ಭಾರತ ಮತ್ತು ಪಾಕಿಸ್ತಾನದೊಂದಿಗೆ ದೊಡ್ಡ ವ್ಯಾಪಾರ ಒಪ್ಪಂದವನ್ನು ಮಾಡುತ್ತಿದ್ದೇವೆ.ಮುಂದುವರೆದು, “ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದ ಜಾರಿಯಾಗುವಲ್ಲಿ ಅಮೆರಿಕದ ಪಾತ್ರವಿದೆ. ಪಾಕಿಸ್ತಾನವು ಕೆಲವು ಅತ್ಯುತ್ತಮ ಜನರನ್ನು ಮತ್ತು ನಿಜವಾಗಿಯೂ ಒಳ್ಳೆಯ ನಾಯಕರನ್ನು ಹೊಂದಿದೆ. ಅದೇ ರೀತಿ ಭಾರತ ನಮ್ಮ ಸ್ನೇಹಿರಾಷ್ಟ್ರವಾಗಿದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ದಕ್ಷಿಣ ಆಫ್ರಿಕಾದೊಂದಿಗಿನ ಅಮೆರಿಕದ ವ್ಯಾಪಾರ ಸಂಬಂಧ ಅಷ್ಟೇನೂ ಸುಮಧುರವಾಗಿಲ್ಲ. ಹೊಸ ಸುಂಕ ನೀತಿಯನ್ವಯ ಅಮೆರಿಕವು ದಕ್ಷಿಣಾ ಆಫ್ರಿಕಾದ ಸರಕುಗಳ ಮೇಲೆ ಶೇ. 31ರಷ್ಟು ಸುಂಕವನ್ನು ವಿಧಿಸುತ್ತಿದೆ. ಇದರ ಹೊರತಾಗಿ ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿದೆ ಎನ್ನಲಾದ ಬಿಳಿಯರ ಮೇಲಿನ ದೌರ್ಜನ್ಯವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಖಂಡಿಸಿದ್ದಾರೆ.

ಈ ವಿಚಾರವಾಗಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಪೋಸಾ ಅವರೊಂದಿಗೆ ಬಹಿರಂಗ ವಾಗ್ವಾದ ನಡೆಸಿರುವ ಡೊನಾಲ್ಡ್‌ ಟ್ರಂಪ್‌, ಬಿಳಿಯರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ಅಧ್ಯಕ್ಷರು ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.ಒಟ್ಟಿನಲ್ಲಿ ಡೊನಾಲ್ಡ್‌ ಟ್ರಂಪ್‌ ಅವರು ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ಮಧ್ಯಸ್ಥಿಕೆವಹಿಸಿರುವುದಾಗಿ ವಾದಿಸುತ್ತಿದ್ದಾರೆ. ಆದರೆ ಭಾರತವು ಈ ವಾದವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, “ಅಮೆರಿಕ ಕೇವಲ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಿತೇ ವಿನಃ ಮಧ್ಯಸ್ಥಿಕೆವಹಿಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದೆ.


Related Articles

Leave a Reply

Your email address will not be published. Required fields are marked *

Back to top button