ಇತ್ತೀಚಿನ ಸುದ್ದಿ
Trending

ಹೈನುಗಾರಿಕೆಯು ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದೆ

ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಮನ್ಮುಲ್ ನಿರ್ದೇಶಕ ಡಾಲು ರವಿ ಹೇಳಿದರು.

ತಾಲ್ಲೂಕಿನ ಅಕ್ಕಿಹೆಬ್ಬಾಳು ಉತ್ಪಾದಕರ ಮಹಿಳಾ ಸಹಕಾರ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಒಕ್ಕೂಟಗಳು ಸೂಕ್ತ ಬೆಲೆ ನೀಡಿ ಹಾಲು ಖರೀದಿ ಮಾಡುತ್ತಿವೆ. ರೈತರು ಒಕ್ಕೂಟಗಳ ಲಾಭ ಪಡೆದುಕೊಳ್ಳಬೇಕು. ಲವಣ ಮಿಶ್ರಣಗಳ ಬಳಕೆ ಹೈನುಗಾರಿಕೆಯಿಂದಾಗುವ ಲಾಭಗಳು ವೈಜ್ಞಾನಿಕವಾಗಿ ಹೈನುಗಾರಿಕೆ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಇದೇ ಸಮಯದಲ್ಲಿ ಸಂಘಕ್ಕೆ ಕಳೆದ ಸಾಲಿನಲ್ಲಿ ಅತ್ಯಧಿಕ ಹಾಲನ್ನು ಸರಬರಾಜು ಮಾಡಿದ ಹಾಲು ಉತ್ಪಾದಕರಿಗೆ‌ ಸನ್ಮಾನಿಸಿ ಉಡುಗೊರೆ ನೀಡಿ ಹಾಗೂ ಎಸ್ ಎಸ್ ಎಲ್ ಸಿ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ಮಾರ್ಗವಿಸ್ತರಣಾಧಿಕಾರಿ ಬಿ.ಸಿ ಮಧು,ಸಂಘದ ಅಧ್ಯಕ್ಷ ಟಿ.ಎನ್ ನಾಗರಾಜು, ಉಪಾಧ್ಯಕ್ಷ ಗುರುಮೂರ್ತಿ, ನಿರ್ದೇಶಕರಾದ ಚಂದ್ರೆಗೌಡ,ನಾಗರಾಜು, ಶಂಕರೇಗೌಡ, ವಸುಮತಿ, ರಾಜಮ್ಮ, ಶಿವಮ್ಮ, ಧನಂಜಯ್,ರಾಮಯ್ಯ,ಎಂ. ಬಿ ಹರೀಶ್ ಕುಮಾರ್, ಸಂಘದ ಕಾರ್ಯದರ್ಶಿ ಯೋಗೇಶ್ ಎ.ವಿ ಹಾಲು ಪರೀಕ್ಷಕಿ ರೇಣುಕಾ, ಗುಮಾಸ್ತಸ್ವಾಮಿ, ಕೃಷ್ಣಾಜಿರವ್, ಸೇರಿದಂತೆ ಗ್ರಾಮಸ್ಥರಿದ್ದರು.

Related Articles

Leave a Reply

Your email address will not be published. Required fields are marked *

Back to top button